Navila dani. ನವಿಲ ದನಿ.

NARASIMHASVAMI (K S). ನರಸಿಂಹಸ್ವಾಮಿ (ಕೆ ಎಸ್)

Navila dani. ನವಿಲ ದನಿ. - Bengaluru Vi Si Sampada 1999 - vii,89

ಮಾತು ಬರುವುದು ಎಂದು ಮಾತಾಡುವುದು ಬೇಡ; ಒಂದು ಮಾತಿಗೆ ಎರಡು ಅರ್ಥವುಂಟು. ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ; ಬರಿದೆ ಆಡುವ ಮಾತಿಗರ್ಥವಿಲ್ಲ. ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ; ಮೀನು ಬೇಳುವ ತನಕ ಕಾಯ ಬೇಕು. ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ; ಹುಡುಕುತ್ತಲಿಹನವನು ಮುತ್ತಿಗಾಗಿ. ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು. ಮೀನಿನಿಂದಲು ನಮಗೆ ಲಾಭವುಂಟು. ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ. ಅವನ ದುಡಿಮೆಗೆ ಕೂಡ ಅರ್ಥವುಂಟು. ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು ಮುತ್ತಕೊಟ್ಟಳು ಅವನ ಹಸಿದ ತುಟಿಗೆ. ಹೃದಯವನು ಕಲಕಿತ್ತು ಅವಳ ಮೌನದ ಮುತ್ತು. ಮುತ್ತು ಸಿಕ್ಕಿತು ಎಂದು ನಕ್ಕವನು. - ಕೆ ಎಸ್ ನರಸಿಂಹಸ್ವಾಮಿ

K894.1 NARN