Sarigannadam Gelge ಸರಿಗನ್ನಡಂ ಗೆಲ್ಗೆ

Apara

Sarigannadam Gelge ಸರಿಗನ್ನಡಂ ಗೆಲ್ಗೆ - Bangalore Chanda Pustaka 2023 - 317 p. PB 21.7x14 cm.

ಶುದ್ಧ ಶುಂಠಿಯಲ್ಲಿ ಶುಂಠಿಯದೇನು ತಪ್ಪು? ಸೋಲುವುದು ಸರಿ, ಸೋತು ಸುಣ್ಣವಾಗುವುದು ಯಾಕೆ? ಎಂಟೇ ದಿಕ್ಕುಗಳಿರುವಾಗ ದಶದಿಕ್ಕು ಅನ್ನುವುದು ಯಾಕೆ? ಗಿರಿಜೆಗೆ ಮೀಸೆ ಯಾಕೆ ಅಂಟಿಕೊಂಡಿತು? ಮರೀಚಿಕೆಗೂ ಮಾರೀಚನಿಗೂ ಸಂಬಂಧ ಇದೆಯೆ? ಈ ಸಂಬಂಧ ಅನ್ನುವುದರಲ್ಲಿ ಬಾಲ ಸೀಳಬೇಕಾದ ಅಕ್ಷರ ಯಾವುದು? ಕಬಂದಬಾಹು ಅನ್ನುವುದರ ಹಿಂದೊಂದು ಕತೆ ಇದೆಯಾ? ಅಡಗೂಲಜ್ಜಿ ಕತೆ ಅಂದರೇನು? ಕುಚಿಕು ಅನ್ನುವುದು ಸಿನಿಮಾ ಹಾಡಿಗಿಂತ ಮೊದಲೇ ಇದ್ದ ಪದವೆ? ಈ ಚಳ್ಳೆಹಣ್ಣನ್ನು ಪೊಲೀಸರಿಗೇ ಯಾಕೆ ತಿನ್ನಿಸುವುದು? ಬಡ್ಡಿಮಗ ಅಂದರೆ ಅಷ್ಟೆಲ್ಲಾ ಕೆಟ್ಟರ್ಥ ಇದೆಯಾ? ನೀಟು ಅನ್ನುವುದು ಕನ್ನಡ ಪದ ಹೇಗಾಗುತ್ತೆ? ಹತ್ಯೆ ಬೇರೆ ವಧೆ ಬೇರೇನಾ? ಬಿರುದು ಸರಿ ಬಾವುಲಿ ಯಾಕೆ ಕೊಡುವುದು? ಧರ್ಮದೇಟಿಗೆ ಧರ್ಮದೇಟು ಅನ್ನುವುದು ಯಾವ ಧರ್ಮ? ತುಕಾಲಿ ಅನ್ನುವ ಪದವನ್ನು ಡಿಕ್ಷನರಿಗೇಕೆ ಸೇರಿಸಿಕೊಂಡಿಲ್ಲ? ದಿಗ್ಗಜರು ಅಲ್ಲ ದಿಗ್ಗಜಗಳು ಅನ್ನಬೇಕು ತಾನೆ? ಜಹಾಂಗೀರಿಗೆ ಆ ಸ್ವೀಟ್ ನೇಮ್ ಬಂದದ್ದು ಹೇಗೆ? ದಮ್ಮಯ್ಯ ದಕ್ಕಯ್ಯ ಸುತರಾಂ, ಚಾಚೂ ಇವರೆಲ್ಲಾ ಯಾರು? ಬಂದಾಗ ಕಣ್ಣು ಮುಚ್ಚಿಕೊಳ್ಳಬಾರದ ಎಣ್ಣೆ ಯಾವುದದು? ಕೊಡೆ ಇರುವುದು ಬಿಸಿಲಿಗೋ ಮಳೆಗೋ? ನಾಗಾಲೋಟದಲ್ಲಿ ಹಾವೂ ಇಲ್ಲ ಲೋಟವೂ ಇಲ್ಲವೆ? ಮಾಣಿ ಅನ್ನುವ ಪದ ಉಡುಪಿ ಹೊಟೆಲುಗಳ ಅಡುಗೆಮನೆಯಲ್ಲಿ ತಯಾರಾದ ಬಿಸಿ ಪದಾರ್ಥವೆ? ಕುಟುಂಬದಲ್ಲಿ ಭಾವ ಒಬ್ಬನೇ ಬಾಲ ಇರುವ ಮಹಾಪ್ರಾಣಿಯೆ? ಪ್ರಮೀಳಾ ರಾಜ್ಯ ಅಂತ ನಿಜಕ್ಕೂ ಒಂದಿತ್ತೆ? ಎಷ್ಟು ಹರದಾರಿ ಸೇರಿದರೆ ಒಂದು ಗಾವುದ? ಡಕೋಟ ಸ್ಕೂಟರ್ ವಿಮಾನದಲ್ಲಿ ಹಾರಿ ಬಂತೆ? ತಲೆ ರುಂಡ ಅನ್ನುವುದಾದರೆ ರುಮಾಲಿಗೆ ಮುಂಡಾಸು ಅನ್ನುವುದೇಕೆ? ಮಮಕಾರಕ್ಕೂ ಮಮತೆಗೂ ವ್ಯತ್ಯಾಸ ಇದೆಯಾ? ಮುಂದಿನ ಶತಮಾನದವರ ಪಾಲಿಗೆ ಈಗ ನಾವಾಡುವ ಕನ್ನಡ ಹಳಗನ್ನಡವಾಗುತ್ತಾ?
ಪದೇಪದೇ ಮಾಡುವ ಕಾಗುಣಿತದ ತಪ್ಪುಗಳು, ಪದಗಳನ್ನು ಒಡೆದು ನೋಡಿದಾಗ ರಟ್ಟಾದ ಗುಟ್ಟುಗಳು, ಯಾವ ಪದದ ಸಿಟಿಜನ್ ಶಿಪ್ ಯಾವ ದೇಶದ್ದು- ಇಂಥ ಆರು ನೂರು ಬೆರಗಿನ ಸಂಗತಿಗಳನ್ನು ಸ್ವಾರಸ್ಯಕರವಾಗಿ ತೆರೆದಿಡುವ ಪುಸ್ತಕವಿದು. ‘ಸರಿಗನ್ನಡಂ ಗೆಲ್ಗೆ’ ರಘು ಅಪಾರ ಅವರ ಕನ್ನಡದ ಪದಯಾತ್ರೆ ಕುರಿತ ಸಂಕಲನವಾಗಿದೆ. ‘ಕನ್ನಡತಿ’ ಸೀರಿಯಲ್ಲಿನ ಪ್ರತಿ ಸಂಚಿಕೆಯ ಕಡೆಯಲ್ಲಿ ಒಂದು ನಿಮಿಷದ ಕನ್ನಡ ಪಾಠವಾಗಿ ಶುರುವಾದದ್ದು ’ಸರಿಗನ್ನಡಂ ಗೆಲ್ಗೆ’ ಎನ್ನುತ್ತಾರೆ ಲೇಖಕರು. ಸುಮಾರು ಏಳುನೂರು ಪಾಠಗಳ ಮೂಲಕ ಸಾವಿರಾರು ಕನ್ನಡ ಪದಗಳ ಬಗ್ಗೆ ಚರ್ಚಿಸಲು ಅನುವು ಮಾಡಿಕೊಟ್ಟ ಅಪರೂಪದ ‘ಪದ’ಯಾತ್ರೆಯ ಕತೆಯು ‘ಸರಿಗನ್ನಡಂ ಗೆಲ್ಗೆ’ ಕೃತಿಯ ಮೂಲಕ ಓದುಗರಿಗೆ ದೊರಕುತ್ತಿದೆ. ‘ತಪ್ಪಾಗೋದು ದೊಡ್ಡ ವಿಷಯ ಅಲ್ಲ, ಸರಿ ಮಾಡ್ಕೊಳೋದು ಸಣ್ಣ ವಿಷಯವೂ ಅಲ್ಲ’ ಎನ್ನುವ ಕಿರುಪಾಠ ಎಲ್ಲರಿಗೂ ನೆಚ್ಚಿತ್ತು. ‘ಪದಾರ್ಥ ಚಿಂತಾಮಣಿ’, ‘ಶಬ್ದಾಶಬ್ದ ವಿವೇಕ’ದಂಥ ಪುಸ್ತಕಗಳನ್ನು ಬರೆದ ಪಾ ವೆಂ ಆಚಾರ್ಯ, ‘ಇಗೋ ಕನ್ನಡ’ದ ಜಿ ವೆಂಕಟಸುಬ್ಬಯ್ಯ, ಕನ್ನಡ ಪದಗಳ ಚರ್ಚೆಗಾಗಿ ಇರುವ ಫೇಸ್ ಬುಕ್ಕಿನ ಗುಂಪುಗಳಾದ ‘ಪದಾರ್ಥ ಚಿಂತಾಮಣಿ’ ಮತ್ತು ‘ವಾಗರ್ಥ’, ಹಾಗೆಯೇ, ಪಿ ವಿ ನಾರಾಯಣರ ‘ಪದಚರಿತೆ’, ಶ್ರೀವತ್ಸ ಜೋಶಿಯವರ ‘ಸ್ವಚ್ಛ ಭಾಷೆ ಅಭಿಯಾನ’ ಅಂಕಣದ ಬರಹಗಳಿಂದಲೂ ವಿಚಾರಗಳನ್ನು ಪಡೆಯಲಾಗಿದೆ. ರತ್ನಕೋಶ, ಕಿಟ್ಟೆಲ್ ಕೋಶಗಳ ಜೊತೆಗೆ ಇಂಟರ್ ನೆಟ್ಟಿನಲ್ಲಿರುವ ಬರಹ ನಿಘಂಟು, ಅಲರ್ ನಿಘಂಟುಗಳೂ ಈ ಕೃತಿಯ ದಾರಿಯನ್ನು ಬೆಳಗಿವೆ.

9788196464165


Kannada Language
Basheyanu Kurithu Colours Kannadadali Prasaravada 600 Kiru Tippanegala Sangraha ಭಾಷೆಯನ್ನು ಕುರಿತು ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ೬೦೦ ಕಿರು ಟಿಪ್ಪಣಿಗಳ ಸಂಗ್ರಹ

K494.8 / APAS