Tyakta (Record no. 153080)

MARC details
000 -LEADER
fixed length control field 05703nam a2200217Ia 4500
003 - CONTROL NUMBER IDENTIFIER
control field OSt
005 - DATE AND TIME OF LATEST TRANSACTION
control field 20240524164357.0
008 - FIXED-LENGTH DATA ELEMENTS--GENERAL INFORMATION
fixed length control field 210210b2014 xxu||||| |||| 00| 0 eng d
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title Kannada
082 ## - DEWEY DECIMAL CLASSIFICATION NUMBER
Classification number K894.3 UDAT
100 ## - MAIN ENTRY--PERSONAL NAME
Personal name UDAYA KUMAR HABBU
Dates associated with a name ಉದಯಕುಮಾರ್ ಹಬ್ಬು
9 (RLIN) 167632
245 ## - TITLE STATEMENT
Title Tyakta
Remainder of title ತ್ಯಕ್ತ
260 ## - PUBLICATION, DISTRIBUTION, ETC.
Place of publication, distribution, etc. KinnigOLi
Name of publisher, distributor, etc. Ananta Pratibha Prakashana
Date of publication, distribution, etc. 2014
300 ## - PHYSICAL DESCRIPTION
Extent vii,169
520 ## - SUMMARY, ETC.
Summary, etc. ಭಾರತದಲ್ಲಿ ರಾಮಾಯಣವನ್ನು; ಅಂತೆಯೇ ಮಹಾಭಾರತವನ್ನು ಬರೆದವರಿಗೆ ಲೆಕ್ಕವಿಲ್ಲ. ಇದು ಭಾರತದ ಎಲ್ಲ ಭಾಷೆಗಳಲ್ಲಿಯೂ ಕಂಡಿದೆ. ಅಂತೆಯೇ ಬಹುತೇಕ ಎಲ್ಲ ಶತಮಾನಗಳಲ್ಲಿ ಸಹ ಕಂಡಿದೆ. ಬರಹದಲ್ಲಿ ಗದ್ಯ, ಪದ್ಯ ಅಂತೆಯೇ ಮೌಖಿಕ ನೆಲೆಗಳಲ್ಲಿ ಸಹ ಇದೆ. ಆದರೂ ಈ ನಿಟ್ಟಿನ ಬರಹಗಳು ಇನ್ನೂ ಮೂಡುತ್ತಿವೆಯೆಂದರೆ ಬರಹಗಾರರ ದಾಹ ಇನ್ನೂ ತೀರಿಲ್ಲ ಎನ್ನಿಸುತ್ತದೆ. ಅಂತೆಯೇ ಈ ಕಥನದ ಸಾಧ್ಯತೆ ಹೊಸ ಹೊಸ ಕಾಲಗಳಿಗೆ ಹೊಸ ಹೊಸ ಬರಹಗಾರರಿಗೆ ವಿಸ್ತರಿಸಿಕೊಳ್ಳುತ್ತಲೇ ಇದೆ ಎನಿಸುತ್ತದೆ. ಇದು ಯಾವುದೇ ಜನ ಮತ್ತು ಸಂಸ್ಕೃತಿ ಮೂಲದ ಕಥನಗಳ ಅನನ್ಯತೆ ಎನ್ನಿಸುತ್ತದೆ. ಈ ನೆಲೆಯಲ್ಲಿ ಹೀಗೂ ಒಂದು ಕಥನವಾಗಿ ಉದಯಕುಮಾರ ಹಬ್ಬು ಅವರ `ತ್ಯಕ್ತ’ ಕಾದಂಬರಿಯಿದೆ.<br/>`ತ್ಯಕ್ತ’ -ಇದು ಮಹಾಭಾರತವನ್ನು ಮೂಲವಾಗಿರಿಸಿಕೊಂಡ ಕಥನವಾಗಿದೆ. ಇದು ಬಾಹ್ಯ ನೆಲೆಯಲ್ಲಿ ಕಾದಂಬರಿಯಾಗಿ ಕಂಡರೆ, ಆಂತರಿಕ ನೆಲೆಯಲ್ಲಿ ಆತ್ಮಕಥನವಾಗಿ ಕಾಣುತ್ತದೆ. ಆದರೆ ಇದನ್ನು ನೇರವಾಗಿ ಈ ಕೃತಿಯ ನಾಯಕನೇ ಬರೆದಿರುವುದರಿಂದ ಇದು ಕಾದಂಬರಿಯೇ ಸರಿ.<br/>ಪ್ರಸ್ತುತ ಕೃತಿಯ ಕೇಂದ್ರ ಪಾತ್ರ ದ್ರೋಣ ಆಗಿದ್ದಾನೆ. ಈತ ತನ್ನ ಆತ್ಮ ಕಥೆಯನ್ನು ನಿರೂಪಿಸುವ ಕ್ರಮದಲ್ಲಿ ಇಲ್ಲಿಯ ಮಹಾಭಾರತದ ಕಥೆಯನ್ನು ನಿರೂಪಿಸುತ್ತ ಹೋಗುತ್ತಾನೆ. ಇಲ್ಲಿ ತಾನೊಂದು ಪಾತ್ರವೂ ಆಗಿದ್ದಾನೆ. ಅಂತೆಯೇ ಒಟ್ಟೂ ಕಥೆಯ ನಿರೂಪಕನೂ ಆಗಿದ್ದಾನೆ. ಇದನ್ನು ಕೇಳುವ ಸಹೃದಯನು ಓದುಗನಾಗಿದ್ದಾನೆ. ಇನ್ನೂ ಸೂಕ್ಷ್ಮವಾಗಿ ಗಮನಿಸಿ ಹೇಳುವುದಾದರ, ಇಲ್ಲಿಯ ನಿರೂಪಕ `ಎಲೈ ಸಹೃದಯನೇ ಎಂದು ವೈಶಂಪಾಯನ ಮುನಿ ಕೇಳುವ ಜನುಮೇಜಯನೇ’ ಇಂಥ ಕಥನವು ಎಂದು ಸಂಭೋಧಿಸುವ ಹಾಗಿಲ್ಲ. ಹಾಗಾಗಿ ಇದು ಸ್ವಗತದ ಕ್ರಮದಲ್ಲಿದೆ ಎಂದು ಭಾವಿಸಬಹುದು. ಆದರೆ ಸ್ವಗತದ ನೆಲೆಯಲ್ಲಿ ಎಷ್ಟು ಮಾತಾಡಿಕೊಳ್ಳಲು ಸಾಧ್ಯ? ಇಷ್ಟು ದೀರ್ಘ ಕಥನವನ್ನು ಹೇಳಿಕೊಳ್ಳುವುದು ಸಹಜಸಾಧ್ಯಗೊಳ್ಳುವ ಸಂವಹನೆಯೇ? ಅಲ್ಲ, ಆದ್ದರಿಂದ ಇದು ಮೇಲ್ನೋಟಕ್ಕೆ ಸುದೀರ್ಘ ಎನ್ನಿಸಿದರೂ ವಾಸ್ತವದಲ್ಲಿ ಸಹೃದಯನನ್ನು ಸಂಬೋಧಿಸಿ ಬೆಳೆದ ಕಥನವೇ ಎನ್ನಿಸುತ್ತದೆ.<br/>ಇಂಥ ಕಥನವು ದ್ರೋಣನಿಂದ ಆರಂಭಗೊಳ್ಳುತ್ತದೆ. `ನಾನು ದ್ರೋಣ,’ ನಾನು ಇಂತಹ ವಂಶದಲ್ಲಿ ಹುಟ್ಟಿದವನು ಇತ್ಯಾದಿಯಾಗಿ ಸ್ವಪರಿಚಯದ ಮೂಲಕ ತೆರೆದುಕೊಳ್ಳುತ್ತದೆ. ಕ್ರಮೇಣ ಈ ಮೂಲಕ ಇಡೀ ಮಹಾಭಾರತವೇ ತೆರೆದುಕೊಳ್ಳುತ್ತದೆ. ಅಂತಿಮವಾಗಿ ಇದು ಕೊನೆಗೊಳ್ಳುವುದು ತಾನು ಕುರುಕ್ಷೇತ್ರದಲ್ಲಿ ಸಾವನ್ನಪ್ಪಿ, ಸ್ವರ್ಗವಾಸಿ ಆದಾಗ. ಇದು ಇಲ್ಲಿಯ ಕಥನ ಆದರೆ ಈ ಕಥನವನ್ನು ದ್ರೋಣನೇ ನಿರೂಪಕನಾಗಿ ಹೇಳುವುದು ಇಲ್ಲಿಯ ತಂತ್ರ. ಇದು ಕೃತಿಯ ಒಂದು ಮಖ್ಯ ನೆಲೆ. ಅಂತೆಯೇ ಇಲ್ಲಿ ಅನಾವರಣಗೊಳ್ಳುತ್ತಿರುವುದು ಕೇವಲ ಕಥೆ ಮಾತ್ರವಲ್ಲ; ವಿಮರ್ಶೆ ಕೂಡಾ ಇದೆ. ಆ ವಿಮರ್ಶೆಯನ್ನು ಸಹಿತ ಮಾಡುತ್ತಿರುವುದು ದ್ರೋಣನೇ ಆಗಿದ್ದಾನೆ. ಆ ವಿಮರ್ಶೆ ಮತ್ತು ಕಥನದಲ್ಲಿ ತಾನು ಪಾತ್ರವೂ ಆಗಿ ಬಿಂಬಿತನಾಗಿದ್ದಾನೆ.
650 ## - SUBJECT ADDED ENTRY--TOPICAL TERM
Topical term or geographic name entry element Tyakta
9 (RLIN) 167633
690 ## - LOCAL SUBJECT ADDED ENTRY--TOPICAL TERM (OCLC, RLIN)
Topical term or geographic name as entry element Kannada Fiction
9 (RLIN) 167634
906 ## - LOCAL DATA ELEMENT F, LDF (RLIN)
a 068960
942 ## - ADDED ENTRY ELEMENTS (KOHA)
Source of classification or shelving scheme Dewey Decimal Classification
Koha item type Book
Holdings
Withdrawn status Lost status Damaged status Not for loan Collection code Home library Current library Shelving location Date acquired Source of acquisition Cost, normal purchase price Total Checkouts Full call number Barcode Date last seen Price effective from Koha item type
          St Aloysius Library St Aloysius Library   02/17/2021 Ananta Pratibha Prakashana, Kinnigoli 120.00   K894.3 UDAT 068960 02/17/2021 02/17/2021 Book